Tuesday 1 May, 2012

ಸವಾಲು


ಕಾರ್ಮುಗಿಲುಗಳೊಂದಾಗಿ
ಸೂರ್ಯನನೆ ಮರೆಮಾಚಿರಲು
ಜಗವನಾವರಿಸಿತು
ರವಿಯಿರದ ಸಮಯದಂತಾ ಕತ್ತಲು,
ಮತ್ತೆ ತಮ್ಮೊಳಗೆ ತಾವೆ
ಕಚ್ಚಾಡಿ, ಸಿಡಿಲ ಸಿಡಿಸಲು
ಭುವಿಯನಾವರಿಸಿತು
ರವಿಯಿರುವ ಸಮಯದಂತಾ ಹೊನಲು,
ಅಬ್ಬಾ..! ನೀರಹನಿಗಳಿಂದಾದ
ಈ ಕಪ್ಪಗಿನ ಮೋಡಗಳು
ಭುವಿಯ ಬೆಳಗೋ ಭಾಸ್ಕರನಿಗೆ
ಹಾಕುತಿದೆಯೇ ಸವಾಲು..??

No comments:

Post a Comment