Sunday 2 September, 2012

ಸಹನೆ

ಹಗಲಿರುಳೆನ್ನದೆ
ಸಾಗಿದೆ ಕಾರ್ಮುಗಿಲ
ಘನಘೋರ ಯುದ್ಧ,
ಗುಂಪು ಗುಂಪಾಗಿ
ವಸುಧೆಯ ಮೇಲೆ
ಮಾಡುತಿದೆ ದಾಳಿ,
ಆದರೂ ಭುವಿಯ
ಸಹನೆಯಲಿ ಏರುಪೇರಿಲ್ಲ,
ದಾಳಿಗೊಳಗಾದದ್ದು
ವಸುಧೆಯಾದರೂ
ಸೋತು ಹೋದದ್ದು
ಕಾರ್ಮುಗಿಲು,
ಇಳೆಯ ಸಹನೆಯನು
ಸಂಹರಿಸಲಾಗದೇ
ಬೀಸಿದ ತಂಗಾಳಿಯ
ಜೊತೆ ಪರಾರಿಯಾಯಿತಲ್ಲ..

No comments:

Post a Comment