Friday 28 September, 2012

ಸರಸ....

ಇರುಳಲಿ ಬಾನಿಗೆ
ಕಾವಲಿರು ಎಂದು
ತನ್ನೊಡಲ ಬೆಳಕನಿತ್ತು,
ಕೋಟಿ ತಾರೆಗಳ
ಸೈನ್ಯವನೂ ಇತ್ತು,
ಕಡಲಿನಾಳದಲ್ಲಿನ
ಮತ್ಸ್ಯಕನ್ಯೆಯರೊಡನೆ
ಸರಸವಾಡಲು
ಹೋದ ಭಾಸ್ಕರನಿಗೆ,
ಚಂದಿರನ ಅಸಮರ್ಥತೆ
ಗೊತ್ತಾದದ್ದು ಬಾನಾಡಿಗಳ
ಇಂಚರವೆನುವ ಆರ್ತನಾದ
ಕೇಳತೊಡಗಿದಾಗ,
ಸಿಡುಕಿನ ಕೆಂಪು ಬಣ್ಣ
ಅವನ ಮೊಗವನಲಂಕರಿಸಿತ್ತು
ಸರಸವನು ನಿಲ್ಲಿಸಿ
ಅವರನೆಲ್ಲಾ ತೊರೆದು
ಮೂಡಣದ ಕದವ ತೆಗೆದು
ಆಗಸಕೆ ಬಂದಾಗ....

No comments:

Post a Comment