Friday 26 July, 2013

ಜೈ ಜವಾನ

ಭರತ ಭೂಮಿಯ ವೀರ ಯೋಧರಿಗಿದೋ ನನ್ನ ನಮನ
ಮಾಡಿದರಂದು ಒಳಬಂದ ಪಾಕ್ ಯೋಧರ ನಿರ್ನಾಮ ಹವನ
ನೆರೆಯ ಧೂರ್ತ ನರಿಗಳ ಕುತಂತ್ರ ಯೋಜನೆಯ ಹನನ
ಭೂರಿ ಭೋಜನವನಿತ್ತು ಸಂತಸಪಡಿಸಿದರು ಯಮನ
ಕಳೆದುಕೊಂಡಿದ್ದ ಕಾರ್ಗಿಲಿನದಾಯಿತು ಭವ್ಯ ಪುನರಾಗಮನ
ದುರ್ವಿಧಿ.. ಆಳುತಿಹ ಭೂಪರು ಕೊಡುತಿಲ್ಲ ಈ ಸಾಧನೆಯೆಡೆ ಗಮನ
ಆದರೂ ಬೇಸರದಿ ಕುಗ್ಗದಿರು, ಕೆಚ್ಚೆದೆಯ ಓ ಜವಾನ
ನಿಮ್ಮೀ ಯಶೋಗಾಥೆಯ ಹಾಡುವೆವು ನಾವ್ ಪ್ರತಿದಿನ
ಈ ಹಾಡ ಹಾಡುತಲೇ ಕಳೆಯಲಿ ನಮ್ಮ ಜೀವನ

No comments:

Post a Comment